ಉಪ್ಪಿನಂಗಡಿ ಮತ್ತು ಕುಂತೂರು ಲುಕ್ಮಾನ್ ಅಭಿಮಾನಿ ಬಳಗದವರಿಂದ ಇಫ್ತಾರ್ ಕೂಟ
ಉಪ್ಪಿನಂಗಡಿ: ಉಪ್ಪಿನಂಗಡಿ ಮತ್ತು ಕುಂತೂರು ಲುಕ್ಮಾನ್ ಅಭಿಮಾನಿ ಬಳಗದವರು ನಿನ್ನೆ ಕುಂತೂರು ಜುಮಾ ಮಸೀದಿಯಲ್ಲಿ ಏರ್ಪಡಿಸಿದಂತಹ ಇಫ್ತಾರ್ ಕೂಟದಲ್ಲಿ ದ.ಕ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷರಾದ ಲುಕ್ಮಾನ್ ಮತ್ತು ನೂರಾರು ಉಪವಾಸಿಗರು ಪಾಳ್ಗೊಂಡಿದ್ದರು. ಈ ಸಂಧರ್ಭದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ನವೀದ್ ಅಖ್ತರ್, ಸುಳ್ಯ ವಿಧಾನ ಸಭಾ ಕ್ಷೇತ್ರದ ಯುವ ಕಾಂಗ್ರೆಸ್ನ ಉಪಾಧ್ಯಕ್ಷರಾದ ಶಾಫಿ, ಮುನಾವರ್, ಸಫ್ವಾನ್, ಶಾಫಿ ಕೈಕಂಬ, ನದೀಂ, ಆದಿಲ್ ಹಾಗೂ ಅನೇಕ ಯುವ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು. ಈ ಕಾರ್ಯಕ್ರಮವನ್ನು ಯುವ ಕಾಂಗ್ರೆಸ್ನ ಸಕ್ರೀಯ ಕಾರ್ಯಕರ್ತರಾಗಿರುವ ಮುತ್ತಲಿ ಕುಂತೂರು, ನವಲ್ ಉಪ್ಪಿನಂಗಡಿ ಮತ್ತು ಚಮ್ಮಿ ಉಪ್ಪಿನಂಗಡಿ ಆಯೋಜಿಸಿದ್ದರು.


Comments
Post a Comment